Chief Justice of India NV Ramana
ನವದೆಹಲಿ: ವ್ಯಾಜ್ಯ ಪರಿಹಾರಕ್ಕೆ ಮಧ್ಯಸ್ಥಿಕೆಯೇ ಮೊದಲ ಹೆಜ್ಜೆಯಾಗಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಅಭಿಪ್ರಾಯಪಟ್ಟಿದ್ದಾರೆ.
ಭಾರತ- ಸಿಂಗಾಪುರ ಮಧ್ಯಸ್ಥಿಕೆ ಶೃಂಗ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, 'ದೇಶದ ಮೂರು ಹಂತದ ನ್ಯಾಯ ವ್ಯವಸ್ಥೆಯಲ್ಲಿ 4.5 ಕೋಟಿ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದ್ದು, ವ್ಯಾಜ್ಯಗಳನ್ನು ಬಗೆಹರಿಸಲು ಮಧ್ಯಸ್ಥಿಕೆಯನ್ನು ಮೊದಲ ಹೆಜ್ಜೆಯಾಗಿ ಕಡ್ಡಾಯಪಡಿಸಬೇಕು. ಈ ನಿಟ್ಟಿನಲ್ಲಿ ಕಾನೂನು ರೂಪಿಸುವ ಅಗತ್ಯವಿದೆ ಎಂದು ಹೇಳಿದರು.
Chief Justice N.V. Ramana was speaking at the India - Singapore Mediation Summit 2021, organised by Singapore International Mediation Centre (SIMC), in strategic partnership with CAMP Mediation, and Mediation Mantras.